Breaking News

ಕರ್ನಾಟಕ ರಾಜ್ಯದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಜೆ.ಅಬ್ಬಾಸ್‌ ಮುಲ್ಲಾ ಆಯ್ಕೆ

ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ರಾಜ್ಯದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್‌ ಮುಲ್ಲಾ ಅವರು ಆಯ್ಕೆಯಾಗಿದ್ದಾರೆ.

ಸುಮಾರು 25 ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅವಿಸ್ಮರಣೀಯ ಸೇವೆಯನ್ನು ಸಲ್ಲಿಸಿರುವ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಅವರು ಈ ಹಿಂದೆ ಧಾರವಾಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೂಡ ಸೇವೆ ಸಲ್ಲಿಸಿದ್ದು, ಈಗ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿರುವುದು ಧಾರವಾಡ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

ಇನ್ನೂ ಹಿರಿಯ ಪತ್ರಕರ್ತರಾದ ಜೆ. ಅಬ್ಬಾಸ್ ಮುಲ್ಲಾ ಅವರು ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಾಗೂ ಪತ್ರಕರ್ತರ ಬಳಗದಿಂದ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *