ಧಾರವಾಡ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಿನ್ನೆಯಷ್ಟೇ ಧಾರವಾಡ ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದ್ದರು. ಇಂದು ಎಲ್ಲಾ ನೌಕರರು ತಮ್ಮ ಧರಣಿಯನ್ನು ಧಾರವಾಡ ಡಿಸಿ ಕಚೇರಿ ಎದುರಿಗೆ ಶಿಫ್ಟ್ ಮಾಡಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಗುಣಮಟ್ಟದ ಟ್ಯಾಬ್ ನೀಡಬೇಕು, ಕಚೇರಿಯಲ್ಲಿ ಪ್ರಿಂಟರ್ ಹಾಗೂ ಸ್ಕ್ಯಾನರ್ ನೀಡಬೇಕು ಹಾಗೂ ಕಚೇರಿ ಸಿಬ್ಬಂದಿಗೆ ಸುಸಜ್ಜಿತ ಟೇಬಲ್, ಖುರ್ಚಿ ಪೂರೈಕೆ ಮಾಡಬೇಕು ಹಾಗೂ ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದಾಗ ಆತನ ಕುಟುಂಬಕ್ಕೆ 40 ಲಕ್ಷ ಪರಿಹಾರ ನೀಡಬೇಕು ಎಂದು ಸಿಬ್ಬಂದಿ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

