Breaking News

ತಪ್ಪು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಮೈಸೂರು: ತಪ್ಪು ಮಾಹಿತಿ ಕೊಟ್ಟ ತೋಟಗಾರಿಕಾ ಇಲಾಖೆಯ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡ ಪ್ರಸಂಗ ನಗರದಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಪ್ಪು ಮಾಹಿತಿ ಮುದ್ರಿಸಿ ನೀಡಿದ್ದರಿಂದ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸಭೆಗೆ ಹಿಂದಿನ ದಿನ ಸರಿಯಾದ ಹೋಂವರ್ಕ್ ಯಾಕೆ ಮಾಡಲಿಲ್ಲ, ಈ ರೀತಿ ತಪ್ಪು ಮಾಹಿತಿ ಮುದ್ರಿಸಿ ಸಭೆಗೆ ನೀಡಿದರೆ ನೀವೇ ಹೊಣೆ ಆಗಬೇಕಲ್ವಾ ಎಂದು ಸಿಎಂ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಈ ವೇಳೆ ಅಧಿಕಾರಿ ಕ್ಷಮೆ ಕೋರಿ, ಮುಂದೆ ಯಡವಟ್ಟುಗಳು ಆಗದಂತೆ ಎಚ್ಚರಿಕೆ ವಹಿಸುವುದಾಗಿ ತಪ್ಪೊಪ್ಪಿಕೊಂಡು, ತಿದ್ದಿಕೊಳ್ಳುವುದಾಗಿ ಸಭೆಗೆ ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *