ಗೋಕಾಕ: ಜತ್ತ- ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್ ಆಗುತ್ತದೆ ಈ ಭಾಗದ ಜನರ ಓಡಾಟಕ್ಕೂ ಸಮಸ್ಯೆಯಾಗಿದೆ. ಎತ್ತರದ ಸೇತುವೆ ನಿರ್ಮಾಣದ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಈಗ ಅದಕ್ಕೆ ಕಾಲ ಕೂಡಿಬಂದಿದೆ. ಇನ್ನು ಆರೇ ತಿಂಗಳಲ್ಲಿ ಕಾಮಗಾರಿ ಪೂರ್ಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ, ಹೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು ಅವರ ಇಲಾಖೆಯ ಪಾತ್ರಗಳನ್ನು ವಿವರಿಸಿದರು ಕಾಂಗ್ರೆಸ್ ಮುಖಂಡರೂ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

