Breaking News

ಎಡಿಜಿಪಿ ಎಂ.ಚಂದ್ರಶೇಖ‌ರ್ ಅವರು ಬಳಸಿದ ಪದಗಳನ್ನು ವಿರೋಧಿಸಿ ಪ್ರತಿಭಟನೆ

ಧಾರವಾಡ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕುರಿತು ಎಡಿಜಿಪಿ ಎಂ.ಚಂದ್ರಶೇಖ‌ರ್ ಅವರು ಬಳಸಿದ ಪದಗಳನ್ನು ವಿರೋಧಿಸಿ ಧಾರವಾಡದಲ್ಲಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು, ಎಡಿಜಿಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಒಬ್ಬ ಕೇಂದ್ರ ಸಚಿವರಿಗೆ ಇವರು ಕೆಟ್ಟ ಪದಗಳನ್ನು ಬಳಕೆ ಮಾಡಿ ಮಾತನಾಡುತ್ತಾರೆ. ಇಂತಹ ಅಧಿಕಾರಿ ಮೇಲೆ ಕೇಂದ್ರ ಗೃಹ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *