Breaking News

ತೋಟಗಾರಿಕೆ ಇಲಾಖೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ.
ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಈ ಮೇಲ್ಕಂಡ ಯೋಜನೆಗಳಿಗೆ ಆಯಾ ಯೋಜನೆಗಳಲ್ಲಿ ನಿಗಧಿಪಡಿಸಿದ ಮಾರ್ಗಸೂಚಿಯಂತೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಎಲ್ಲಾ ಯೋಜನೆಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅತೀ ಸಣ್ಣ ರೈತರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ನಮೂನೆ, ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *