ಹುಬ್ಬಳ್ಳಿ: ಪ್ರತಿಷ್ಠಿತ ಶ್ರೀ ಸಿದ್ಧಾರೂಢರ ಮಠಕ್ಕೆ ಆಗಮಿಸಿದ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಸಿದ್ಧಾರೂಢರ ದರ್ಶನ ಪಡೆದರು.
ಪ್ರತಿಷ್ಠಿತ ಮಠಕ್ಕೆ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಅವರು ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಇವರ ಜೊತೆಗೆ ಶಾಸಕ ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಪ್ ಕಂಪನಿ ಮಾಲೀಕರಾದ ವಿಎಸ್ವಿ ಪ್ರಸಾದ್ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು. ಪ್ರಥಮ ಬಾರಿಗೆ ಸಿದ್ಧಾರೂಢ ಮಠಕ್ಕೆ ಆಗಮಿಸಿದ ಸಚಿವರಿಗೆ ಮಠದ ಆಡಳಿತ ಮಂಡಳಿಯಿಂದ ಸನ್ಮಾನ ಮಾಡಿ ಸತ್ಕರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

