Breaking News

ಧಾನ್ಯದ ಚೀಲಗಳು ಕಳುವು ಆರೋಪ : ಐಜಿಪಿ ವಿಕಾಸ್‌ಕುಮಾರ್ ವಿಕಾಸ್ ಪ್ರತಿಕ್ರಿಯೆ

ಧಾರವಾಡ: ಅಣ್ಣಿಗೇರಿ ಎಪಿಎಂಸಿಯಲ್ಲಿ ದಾಸ್ತಾನು ಮಾಡಲಾಗಿದ್ದ ಧಾನ್ಯದ ಚೀಲಗಳು ಕಳುವು ಆಗಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಸ್‌ಕುಮಾರ್ ವಿಕಾಸ್ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಣ್ಣಿಗೇರಿ ಎಪಿಎಂಸಿ ಗೋದಾಮಿನಲ್ಲಿ ರೈತರು ಬೆಳೆದ ಕಡಲೆ-ಹೆಸರು ದಾಸ್ತಾನು ಮಾಡಲಾಗಿತ್ತು. ಅದರಲ್ಲಿ 4141 ಚೀಲ ಕಡಲೆ ಮತ್ತು ಹೆಸರು ನಾಪತ್ತೆಯಾಗಿದ್ದವು. ಈ ಸಂಬಂಧ ಮೇಲಾಧಿಕಾರಿಗಳು ಅಣ್ಣಿಗೇರಿ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು ಎಂದರು.

ಈ ನಾಪತ್ತೆ ಪ್ರಕರಣ ಪತ್ತೆ ಮಾಡುವುದಕ್ಕಾಗಿ 4 ತನಿಖಾ ತಂಡ ರಚಿಸಲಾಗಿತ್ತು. ಈಗ ಈ ತನಿಖಾ ತಂಡ ಇಬ್ಬರನ್ನು ಬಂಧಿಸಿದೆ. ಪ್ರಭಾ ಉಗ್ರಾಣ ವ್ಯವಸ್ಥಾಪಕ ಆಕಾಶ ಮುಶಣ್ಣವರ ಹಾಗೂ ಆತ ಸಹೋದ್ಯೋಗಿ ಶಶಿಕುಮಾರ ಹಿರೇಮಠ ಎಂಬುವವರನ್ನು ಬಂಧಿಸಲಾಗಿದೆ. ಈ ಇಬ್ಬರೂ ಗದಗ ಮತ್ತು ಧಾರವಾಡದಲ್ಲಿ ಕಡಲೆ, ಹೆಸರು ಮಾರಾಟ ಮಾಡಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಲ್ಲಿ ಸಾಲ ಸಹ ಪಡೆದಿದ್ದಾರೆ. ಈ ಇಬ್ಬರೂ ಆರೋಪಿಗಳು ಹತ್ತು ದಿನಗಳ ಕಾಲ ಪೊಲೀಸ್ ವಶದಲ್ಲಿದ್ದಾರೆ ಎಂದರು.

Share News

About Shaikh BigTv

Check Also

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!

ದೊಡ್ಡಬಳ್ಳಾಪುರ: ಹೋಟೆಲ್‌ನಲ್ಲಿ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ …

Leave a Reply

Your email address will not be published. Required fields are marked *