ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ಕಾರ್ಮಿಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಕಾಲದಲ್ಲಿ ವೇತನ ನೀಡುವುದು, ಸೇವಾ ಹಿರಿತನ ಭತ್ಯೆ ನೀಡುವುದು, ಕಾಯಂ ಸರ್ಕಾರಿ ನೌಕರರನ್ನಾಗಿ ನೇಮಿಸಿಕೊಳ್ಳುವುದು, ಕನಿಷ್ಠ ವೇತನ, ಆರೋಗ್ಯ ರಕ್ಷಣೆ, ಇಪಿಎಫ್, ಇಎಸ್ಐ, ನಿವೃತ್ತಿ ಪಿಂಚಣಿ, ಹೆರಿಗೆ ರಜೆ ಸೌಲಭ್ಯ ನೀಡುವುದು, ಎಪ್ರೀಲ್, ಮೇ ತಿಂಗಳ ಬಾಕಿ ಗೌರವ ಧನ ಪಾವತಿಸುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ಕಾರ್ಮಿಕರು ಎಸ್ಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

