ಧಾರವಾಡ ; ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ ನೀಡುವ ಯೋಜನೆಗಾಗಿ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಮತ್ತು ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪ್ರತಿಗಳನ್ನು ಲಗತ್ತಿಸಿ ಅಕ್ಟೋಬರ್ 20, 2024 ರೊಳಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9845171789 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

