ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ 2024-25ನೇ ಸಾಲಿನ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ ಸುಮಾರು 10,000 ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ ಆಗಿದೆ. ಇದು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್ ಅವರು, ರಾಜ್ಯ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ದಿನೇ ದಿನೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕ್ಷೀಣಿಸುತ್ತಿದೆ ಎಂದು ಲಭ್ಯ ವರದಿ ಉಲ್ಲೇಖಿಸಿ ಅವರು ಮಾತನಾಡಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಬಂದು 17 ತಿಂಗಳು ಆಗಿದೆ ದಿನ ಬೆಳಗಾದರೆ ಭ್ರಷ್ಟಾಚಾರ, ರಾಜಕೀಯ ಮೇಲಾಟ, ಕುರ್ಚಿ ಗುದ್ದಾಟ, ಆಂತರಿಕ ಕಲಹ, ಬಾಣ ಬಡಿದಾಟಗಳಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಳುಗಿ ಹೋಗಿದೆ. ಕಾಂಗ್ರೆಸ್ ಪಕ್ಷ ಸರ್ಕಾರದ ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಪರಿಣಾಮವಾಗಿ ಇಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದೆ ಎಂದು ಅವರು ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

