Breaking News

ಅನ್ನ ಹಾಗೂ ಸಾಂಬಾರನ್ನು ಡಿಸಿ ಕಚೇರಿಗೆ ತಂದು ದಿಢೀರ್ ಪ್ರತಿಭಟನೆ

ಧಾರವಾಡ: ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಊಟ ಸರಿಯಾಗಿಲ್ಲ ಎಂದು ಆರೋಪಿಸಿ ಸಪ್ತಾಪುರ ಪರಿಶಿಷ್ಟ ವರ್ಗದ ಮೆಟ್ರಿಕ್‌ ನಂತರದ ಹಾಸ್ಟೆಲ್‌ನ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ನೀಡಿದ ಅನ್ನ ಹಾಗೂ ಸಾಂಬಾರನ್ನು ಡಿಸಿ ಕಚೇರಿಗೆ ತಂದು ದಿಢೀರ್ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‌ನ ಅನ್ನದ ಪಾತ್ರೆ, ಸಾಂಬಾರಿನ ಬಕೆಟ್ ಹಿಡಿದು ಬಂದ ವಿದ್ಯಾರ್ಥಿಗಳು, ಅವುಗಳನ್ನು ಡಿಸಿ ಕಚೇರಿ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ಹಾಸ್ಟೆಲ್‌ನಲ್ಲಿ ನೀಡುತ್ತಿರುವ ಊಟ ಕಳಪೆ ಗುಣಮಟ್ಟದ್ದಾಗಿದ್ದು, ಈ ಹಿಂದೆಯೇ ಈ ಬಗ್ಗೆ ಪ್ರತಿಭಟನೆ ನಡೆಸಲಾಗಿತ್ತು. ಆದರೂ ಗುಣಮಟ್ಟದ ಊಟ ನೀಡಲಾಗುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಇಂದು ಅನ್ನ ಹಾಗೂ ಸಾಂಬಾರನ್ನು ಧಾರವಾಡ ಡಿಸಿ ಕಚೇರಿ ಎದುರೇ ತಂದಿಟ್ಟು ಪ್ರತಿಭಟನೆ ನಡೆಸಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *