ನವಲಗುಂದ: ತಾಲೂಕಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಹೂವು ತೆಂಗಿನ ಸಸಿ ಹಾಗೂ ತಾಯಿಗೆ ಸಿಹಿ ನೀಡುವ ಮೂಲಕ ಮಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ತಹಶೀಲ್ದಾರ ಸುಧೀರ ಸಾಹುಕಾರ ಚಾಲನೆ ನೀಡಿದರು. ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿದಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಡಾವೋ’ ಇನ್ನೂ ಹೆಚ್ಚಾಗಿ ಅನುಷ್ಠಾನಕ್ಕೆ ಬರಬೇಕಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

