Breaking News

ದಸರಾ ಹಬ್ಬ : ರೈಲುಗಳ ತಾತ್ಕಾಲಿಕ ನಿಲುಗಡೆ ವಿವರ

ಹುಬ್ಬಳ್ಳಿ: ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ಮೈಸೂರು-ಬೆಳಗಾವಿ-ಮೈಸೂರು (ರೈಲು ಸಂಖ್ಯೆ 17301/17302) ಡೈಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ಈ ಕೆಳಗಿನ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ.

ಅಕ್ಟೋಬ‌ರ್ 9ರಿಂದ 13ರ ವರೆಗೆ ಮೈಸೂರಿನಿಂದ ಪ್ರಾರಂಭವಾಗುವ ಮೈಸೂರು-ಬೆಳಗಾವಿ (17301) ಡೈಲಿ ಎಕ್ಸ್‌ಪ್ರೆಸ್ ರೈಲು ಬೆಳಗುಳ, ಸಾಗರಕಟ್ಟೆ, ಹೊಸ ಅಗ್ರಹಾರ, ಅಕ್ಕಿಹೆಬ್ಬಾಳು, ಬೀರಹಳ್ಳಿ ಹಾಲ್ಟ್ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯಾಗಲಿದೆ.

ಅಕ್ಟೋಬರ್ 11ರಂದು ಬೆಳಗಾವಿ ನಿಲ್ದಾಣದಿಂದ ಹೊರಡುವ ಬೆಳಗಾವಿ-ಮೈಸೂರು (17302) ಡೈಲಿ ಎಕ್ಸ್‌ಪ್ರೆಸ್‌ ರೈಲು ಮಾವಿನಕೆರೆ, ಬೀರಹಳ್ಳಿ ಹಾಲ್ಟ್, ಅಕ್ಕಿಹೆಬ್ಬಾಳು, ಹೊಸ ಅಗ್ರಹಾರ, ಸಾಗರಕಟ್ಟೆ ಮತ್ತು ಬೆಳಗುಳ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *