ಗದಗ: ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು ಗದಗ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಬಳಿ ಸೇತುವೆ ಜಲಾವೃತವಾಗಿದ್ದು ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಜಲಾವೃತಗೊಂಡಿದ್ದು ರೋಣ ಹಾಗೂ ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆ ಹಳ್ಳದ ಬಳಿ ತೆರಳದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಧ್ವನಿವರ್ಧಕದ ಜಿಲ್ಲಾಡಳಿತ ಎಚ್ಚರಿಕೆ ನೀಡುತ್ತಿದೆ. ಬೆಣ್ಣೆ ಹಳ್ಳದ ಸುತ್ತಮುತ್ತಲಿನ ಜಮೀನುಗಳು ಜಲಾವೃತಗೊಂಡು ರೈತರು ಬೆಳೆದ ಗೋವಿನಜೋಳ, ಹತ್ತಿ, ಈರುಳ್ಳಿ ಬೆಳೆಗಳು ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

