Breaking News

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆಹಳ್ಳ: ರಸ್ತೆ ಸಂಪರ್ಕ ಸ್ಥಗಿತ

ಗದಗ: ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು ಗದಗ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಬಳಿ ಸೇತುವೆ ಜಲಾವೃತವಾಗಿದ್ದು ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಜಲಾವೃತಗೊಂಡಿದ್ದು ರೋಣ ಹಾಗೂ ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆ ಹಳ್ಳದ ಬಳಿ ತೆರಳದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಧ್ವನಿವರ್ಧಕದ ಜಿಲ್ಲಾಡಳಿತ ಎಚ್ಚರಿಕೆ ನೀಡುತ್ತಿದೆ. ಬೆಣ್ಣೆ ಹಳ್ಳದ ಸುತ್ತಮುತ್ತಲಿನ ಜಮೀನುಗಳು ಜಲಾವೃತಗೊಂಡು ರೈತರು ಬೆಳೆದ ಗೋವಿನಜೋಳ, ಹತ್ತಿ, ಈರುಳ್ಳಿ ಬೆಳೆಗಳು ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *