ಕಲಘಟಗಿ : ಕಲಘಟಗಿ ತಾಲ್ಲೂಕಿನ ರೈತರು ಹಲವು ವರ್ಷಗಳಿಂದ ತಮ್ಮ ಹೊಲಗಳಲ್ಲಿ ಕಬ್ಬು ಬೆಳೆಯುತ್ತಿದ್ದಾರೆ. ಕಳೆದ ವರ್ಷ ಮಳೆ ಕಡಿಮೆಯಾಗಿದ್ದರಿಂದ ಕಬ್ಬಿನ ಬೆಳೆ ಇಳುವರಿ ಬಾರದೆ ಇರುವುದರಿಂದ ರೈತ ಸಂಕಷ್ಟ ಎದುರಿಸಿದ್ದಾನೆ. ಈ ವರ್ಷ ಅದೇ ರೀತಿ ನಷ್ಟ ಅನುಭವಿಸಬಾರದು ಎಂದು ಬಹಳಷ್ಟು ರೈತರು ಕಬ್ಬುಗಳನ್ನು ತೆಗೆದು ಗೋವಿನ ಜೋಳ ಬಿತ್ತನೆ ಮಾಡಿದ್ದಾರೆ.
ಆದರೆ ರೈತನ ದುರದೃಷ್ಟಕ್ಕೆ ಈ ವರ್ಷ ಹೆಚ್ಚು ಮಳೆ ಆಗಿದ್ದು ಹೊಲಗಳಲ್ಲಿ ನೀರು ನಿಂತು ಗೋವಿನ ಜೋಳ ಬೆಳೆ ಸಂಪೂರ್ಣ ಹಾಳು ಆಗಿರುವ ಕಾರಣ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದನ್ನು ಗಮನಿಸಬೇಕಾದ ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ತಲೆ ಕೆಡಿಸಿಕೊಂಡಿದ್ದು ಸರ್ಕಾರಕ್ಕೆ ರೈತರ ಸಂಕಷ್ಟ ಕಾಣದೆ ಇರೋದು ವಿಪರ್ಯಾಸವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

