ಅಣ್ಣಿಗೇರಿ: ಪಟ್ಟಣದ ದಾಸೋಹ ಮಠದ ಶ್ರೀಗಳಾದ ಶಿವಕುಮಾರ ಮಹಾಸ್ವಾಮಿಗಳು ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವೇದಾಂತ ವಿಭಾಗದಿಂದ ಶ್ರೀಮದ್ ಭಗವದ್ಗೀತಾ ಕೈವಲ್ಯಪದ್ಧತ್ಯೋಃ ತೌಲನಿಕ ಮಧ್ಯಯನಮ್ ವಿಷಯದ ಕುರಿತು ಪ್ರೌಢ ಪ್ರಭಂದವನ್ನು ಮಂಡಿಸಿ ಡಾಕ್ಟರೇಟ್ ಪದವಿ (ವಿದ್ಯಾವಾರಧಿ)ಯನ್ನು ಪಡೆದಿದ್ದಾರೆ. ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವೇದಾಂತ ವಿಭಾಗ ಸಹಾಯಕ ಪ್ರಾಧ್ಯಾಪಕರಾದ ಡಾ.ಶರತ್ ಚಂದ್ರ ಸ್ವಾಮಿ ಮಾರ್ಗದರ್ಶನ ನೀಡಿದ್ದಾರೆ ಎಂದು ದಾಸೋಹ ಮಠದ ನಿರಂತರ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

