Breaking News

ಶಾಸಕ ಯತ್ನಾಳ ನೇತೃತ್ವದಲ್ಲಿ ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.
ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ ಒತ್ತಾಯಿಸಿ ಪ್ರತಿಭಟನೆ ಆಯೋಜಿಸಲಾಗಿದೆ.
ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ವಿವಿಧ ನಾಯಕರು, ಮುಖಂಡರು ಭಾಗಿಯಾಗಿದ್ದು, ಸಮಾವೇಶದ ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ತೆರಳಿ ರಾಷ್ಟ್ರಪತಿ, ಪ್ರಧಾನಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *