ಕುಂದಗೋಳ : ತಾಲೂಕಿನ ವಿವಿಧ ಭಾಗಗಳಲ್ಲಿ ಸುರಿದು ಧಾರಾಕಾರ ಮಳೆಯ ಪರಿಣಾಮ ಬೆಳೆ ಹಾನಿಯಾದ ಸ್ಥಳಗಳಿಗೆ ಇಂದು ಸಹಾಯಕ ಕೃಷಿ ಅಧಿಕಾರಿ ಅಂಬಿಕಾ ಮಹೇಂದ್ರಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುಡೇನಕಟ್ಟಿ ಸುತ್ತ ಮುತ್ತಲಿನ ಭಾಗಗಳಿಗೆ ಭೇಟಿ ನೀಡಿದ ಅಂಬಿಕಾ ಮಹೇಂದ್ರಕರ್ ರೈತ ಹೊಲಗಳಲ್ಲಿ ಅತಿವೃಷ್ಟಿ ಪರಿಣಾಮ ಹಾಳಾದ ಬೆಳೆಗಳನ್ನು ಪರಿಶೀಲನೆ ನಡೆಸಿ ಪರಿಹಾರಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳಿಗೆ ತಿಳಿಸ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ವೇಳೆ ಹಾಳಾದ ಬೆಳೆಯನ್ನು ರೈತರು ಅಧಿಕಾರಿಗಳಿಗೆ ತೋರಿಸಿ ತಮ್ಮ ಕಷ್ಟ ವಿವರಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಇತರೆ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

