ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿರುವ ನರಚನಹಳ್ಳ ಮಳೆ ಬಂದಾಗ ನೀರು ತುಂಬಿ ರಭಸದಿಂದ ಹರಿದು ಪ್ರವಾಹ ಸೃಷ್ಟಿ ಮಾಡುವ ಸಂದರ್ಭದಲ್ಲಿ ಬೆಣ್ಣೆ ಹಳ್ಳ ಹಾಗೂ ನರಚನಹಳ್ಳ ತುಂಬಿ ಹರಿಯುವ ವೇಳೆ ನರಚನಹಳ್ಳದ ನೀರು ತನ್ನ ಹರಿವಿನಲ್ಲಿ ಸೇರಿಸಿಕೊಳ್ಳದೆ ರೈತರ ಜಮೀನುಗಳಿಗೆ ಪ್ರತಿ ವರ್ಷವೂ ನುಗ್ಗಿ ಬೆಳೆಯನ್ನು ಹಾಳು ಮಾಡುತ್ತಿದೆ.
ನರಚನಹಳ್ಳವನ್ನು ಕೂಡಲೇ ಹೂಳೆತ್ತುವ ಕಾರ್ಯವನ್ನು ಮಾಡಬೇಕು ಹಾಗೂ ಹಳ್ಳದ ನೀರು ನುಗ್ಗಿ ಅಕ್ಕಪಕ್ಕ ಜಮೀನಿನಲ್ಲಿ ಹಾಳಾಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರತ್ನ ಭಾರತ ರೈತ ಸಮಾಜದ ತಾಲೂಕ ಅಧ್ಯಕ್ಷ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಾಗಪ್ಪ ಸಿದ್ದೂನವರ, ರವಿರಾಜ ಅಂಬಳಿ, ಅನೇಕ ರೈತಪರ ಸಂಘಟನೆಯ ಪದಾಧಿಕಾರಿಗಳು ರೈತರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

