ದಾವಣಗೆರೆ: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲೆಯ 44 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಈ ಗ್ರಾಮಗಳಲ್ಲಿನ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಅವರು ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನದ ನಿರ್ಮಾಣಕ್ಕೆ ರೂ. 20 ಲಕ್ಷ, ಹೋಬಳಿ ಮತ್ತು ಪಟ್ಟಣ ಪಂಚಾಯಿತಿ ಮಟ್ಟದಲ್ಲಿ 75 ಲಕ್ಷ ,ತಾಲೂಕು ಮಟ್ಟದಲ್ಲಿ 200 ಲಕ್ಷ ಮತ್ತು ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು ರೂ. 400 ಲಕ್ಷ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಪ್ರಥಮ ಹಂತದಲ್ಲಿ 7 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಎಲ್ಲಾ ತರಹದ ಅಭಿವೃದ್ದಿ ಕಾಮಗಾರಿಗಳನ್ನು ಇಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

