ನವಲಗುಂದ: ಬೆಣ್ಣೆ ಹಳ್ಳ ಹಾಗೂ ತುಪ್ಪರಿಹಳ್ಳ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಭಾಜಪಾ ತಾಲೂಕಾಧ್ಯಕ್ಷ ಗಂಗಪ್ಪ ಮನಮಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಇಂದು ಮೊರಬ ಗ್ರಾಮಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಗಂಗಪ್ಪ ನವಲಗುಂದ ಗ್ರಾಮೀಣ ಭಾಗದ ರೈತರಿಗೆ ಪ್ರವಾಹದಿಂದಾಗಿ ಸಾಕಷ್ಟು ನಷ್ಟವಾಗಿದೆ. ರಸ್ತೆಗಳು ಸಂಪರ್ಕ ಕಡಿದುಕೊಂಡಿರುವದರಿಂದ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥಗೊಂಡಿರುವದರಿಂದ ಪರಿಸ್ಥಿತಿಯನ್ನು ಅವಲೋಕಿಸಿ ರೈತರ ನೆರವಿಗೆ ಪರಿಹಾರ ಕಲ್ಪಿಸಿ ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ತುರ್ತು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

