Breaking News

ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ರಚನೆ ಮಾಡುವಾಗ ವಿಷಯವಾರು ಶಿಕ್ಷಕರ ಅಭಿಪ್ರಾಯಗಳಿಗೆ ಸಂಪೂರ್ಣ ಅವಕಾಶ ನೀಡಬೇಕು : ಬಸವರಾಜ ಗುರಿಕಾರ

ಧಾರವಾಡ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ರಚನೆ ಮಾಡುವಾಗ ವಿಷಯವಾರು ಶಿಕ್ಷಕರ ಅಭಿಪ್ರಾಯಗಳಿಗೆ ಸಂಪೂರ್ಣ ಅವಕಾಶ ನೀಡಬೇಕೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಅಖಿಲ ಭಾರತ ಶಿಕ್ಷಕರ ಪೆಡರೇಷನ್‌ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಏಕರೂಪವಾಗಿರುವುದಿಲ್ಲ, ಪ್ರತಿ ವಿದ್ಯಾರ್ಥಿಗೂ ಭಿನ್ನವಾಗಿರುತ್ತದೆ. ಕಲಿಕಾ ಸಾಮರ್ಥ್ಯ ಹೆಚ್ಚು ಇರುವ ವಿದ್ಯಾರ್ಥಿಗಳು, ಸಾಧಾರಣ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು ಹಾಗೂ ಕನಿಷ್ಠ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು ಇರುತ್ತಾರೆ. ಎಸ್ಸೆಸ್ಸೆಲ್ಸಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸುವಾಗ ವಿಭಿನ್ನ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ಕಲಿಕಾ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಅನಕೂಲವಾಗುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಬೇಕು ಇದರ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬೋಧನಾ ವ್ಯವಸ್ಥೆಯನ್ನು ಸಹ ಪರಿಗಣಿಸಬೇಕು ಪ್ರಶ್ನೆ ಪತ್ರಿಕೆ ತಯಾರಿಸುವಾಗ ಭೌಗೋಳಿಕವಾಗಿ ಶಿಕ್ಷಕರುಗಳಿಗೆ ಅವಕಾಶ ಕಲ್ಪಿಸಬೇಕು ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ಶಿಕ್ಷಕರುಗಳ ನಿರ್ಣಯ ಅಂತಿಮವಾಗಿರಬೇಕು ರೂಪನಾತ್ಮಕ ಮೌಲ್ಯ ಮಾಪನದ ಆಂತರಿಕ ಅಂಕಗಳನ್ನು ಉತ್ತೀರ್ಣತೆಗೆ ಪರಿಗಣೀಸಬೇಕು ಎಂದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *