ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ದಾಳಿ ನಡೆಸಿದ್ದಾರೆ.
ಗೋಪಾಲ ಜೋಶಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರಾಗಿದ್ದು, ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಗೋಪಾಲ ಜೋಶಿಯವರ
ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಹಿಂಭಾಗದಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ
ಬೆಂಗಳೂರನಿಂದ ಖಾಸಗಿ ವಾಹನದಲ್ಲಿ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಎಸಿಪಿ ಚಂದನ್ ನೇತೃತ್ವದಲ್ಲಿ ತೀವ್ರ ವಿಚಾರಣೆ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

