ಬೆಂಗಳೂರು: ಸಮನ್ವಯತೆ, ಸಮಯಪ್ರಜ್ಞ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಮಸ್ಯೆಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚ ಸೂತ್ರ ಅಳವಡಿಸಿಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಿದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಖಾಸಗಿ ಹೋಟೆಲ್ನಲ್ಲಿ ಇಂದು ಆಯೋಜಿಸಲಾಗಿದ್ದ ಪಂಚಾಯತ್ರಾಜ್ ಅಧಿಕಾರಿಗಳ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಜತೆ ಚೆನ್ನಾಗಿ ಸಮನ್ವಯತೆ ಹೊಂದಿದ್ದಾರೆ ಆದರೆ, ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಇಲ್ಲ ಕೆಲ ಅಧಿಕಾರಿಗಳು ಬರೀ ಮೊಬೈಲ್ನಲ್ಲೇ ಕಾಲ ಕಳೆಯುತ್ತಿದ್ದಾರೆ ಈ ವರ್ತನೆ ಬದಲಾಗಬೇಕಿದೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಜೊತೆಗೆ ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ದಕ್ಷತೆಯಿಂದ ಕೆಲಸ ಮಾಡಬೇಕು. ಆಳುವ ಪ್ರವೃತ್ತಿ ಬದಿಗಿರಿಸಿ ಜನರ ಸಮಸ್ಯೆ ಆಲಿಸಿ ಪರಿಹರಿಸುವ ಕಾರ್ಯ ಮಾಡಬೇಕು ಪ್ರಗತಿಯೆಂದರೆ ಕೇವಲ ಅಂಕಿ ಅಂಶಗಳಲ್ಲ ಗ್ರಾಮೀಣ ಜನರಿಗೆ ಬದುಕು ಸುಧಾರಣೆ ಮಾಡುವುದನ್ನು ಮುಖ್ಯ ಧ್ಯೇಯವಾಗಬೇಕು ಎಂದು ಸಲಹೆ ನೀಡಿದರು.
ನಾಲ್ಕು ಪ್ರಮುಖ ಯೋಜನೆಗಳು, ಆಯಪ್ ಹಾಗು ನೀತಿಯನ್ನು ಸಮ್ಮೇಳನದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಗ್ರಾಮೀಣ ಕುಡಿಯುವ ನೀರಿನ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ, ಜೀವಜಲ ನೀರಿನ ಗುಣಮಟ್ಟ ಆಯಪ್, ಸೇವಾ ದರ್ಶಕ ತಂತ್ರಾಂಶ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಯಪ್ ಲೋಕಾರ್ಪಣೆ ಮಾಡಿದ್ದೇವೆ. ಇದು ದೇಶಕ್ಕೆ ಮಾದರಿಯಾಗಿದೆ ಮಹತ್ವ ಜವಾಬ್ದಾರಿ ಹೊಂದಿರುವ ಇಲಾಖೆ ಅಧಿಕಾರಿಗಳ ನಡುವೆ ಸಮನ್ವಯತೆ ಕೊರತೆ ಹೋಗಲಾಡಿಸಲು ಸಮ್ಮೇಳನದ ಮುಖ್ಯ ಉದ್ದೇಶ. ಸಮ್ಮೇಳನದಲ್ಲಿ ನಡೆದ ಚರ್ಚೆ, ಅಭಿಪ್ರಾಯಗಳು ಗ್ರಾಮಗಳ ಅಭಿವೃದ್ಧಿ, ಪ್ರಗತಿ, ಕಾರ್ಯಕ್ರಮಗಳ ಸಬಲೀಕರಣಕ್ಕೆ ಸಹಾಯವಾಗಲಿದೆ ಎಂದು ತಿಳಿಸಿದರು. ಶಾಸಕ ಶರತ್ ಬಚ್ಚೇಗೌಡ, ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆಯುಕ್ತ ಪವನ್ ಕುಮಾರ್ ಮಾಲಿಪಾಟಿ ಸೇರಿ ಇಲಾಖೆ ಸೇರಿ ಮತ್ತಿತರರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





