ಹಿರೇಕೆರೂರು: ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಸದೃಢ ರಾಷ್ಟ್ರ ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರೂಂದಿಗೆ ನಾವೆಲ್ಲರೂ ಕೈಜೋಡಿಸಬೇಕು ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಬೇಕು ಸುಭದ್ರ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಬಿಜೆಪಿ ಬೆಂಬಲಿಸಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

