Breaking News

ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು, ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಲಿ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು. ಬಿಜೆಪಿ ಜೆಡಿಎಸ್ ಒಟ್ಟಾಗಿ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ. ಸಿಪಿ ಯೋಗೇಶ್ವರ್ ಸ್ಪರ್ಧೆಯ ಬಗ್ಗೆ ದೆಹಲಿಯವರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.
ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿ ತೀರ್ಮಾನಿಸುವಲು ಆಗುವುದಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೋ ಅದರಂತೆ ಮಾಡುತ್ತೇವೆ. ಜೆಡಿಎಸ್ ಚಿನ್ಹೆಯ ಅಡಿ ಬಿಜೆಪಿಯವರು ಸ್ಪರ್ಧಿಸುವ ಯೋಚನೆ ಇಲ್ಲ ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅವರು ಯಾರನ್ನು ಬೇಕಾದರೂ ನಿಲ್ಲಿಸಬಹುದು ಎಂದರು.
ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಅನೌನ್ಸ್ ಮಾಡಿಕೊಳ್ಳಬಹುದು ಅಂತಾ ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರೇ ಘೋಷಣೆ ಮಾಡ್ತಾರೆ. ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ ಎಂದು ಸ್ಪಷ್ಟಪಡಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *