Breaking News

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ.

ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಬು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವ್‌ಇ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ ವಿನಾಯಕ ನಿಗೆ ಚಾಕು ಇರಿದಿದ್ದಾನೆ. ಚಾಕುವಿನಿಜದ ಇರಿದ ಸಮೀರ್ ನನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಪೊಲೀಸರು ಬಲೆ ಬೀಸಿದ್ದಾರೆ.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *