Breaking News

ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದ ಕರಿಯಮ್ಮ‌ದೇವಿ ಜಾತ್ರೆ

ಧಾರವಾಡ: ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಕರಿಯಮ್ಮ ದೇವಿ ಜಾತ್ರೆ ಅದ್ದೂರಿಯಿಂದ ನೆರವೇರಿತು.

ಕಳೆದ ನಾಲೈದು ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಕೊನೆಯ ದಿನ ಪಲ್ಲಕ್ಕಿ ಉತ್ಸವ ಹಾಗೂ ದೇವಿಗೆ ಉಡಿ ತುಂಬುವ ಕಾರ್ಯ ನಡೆಯಿತು.

ಕರಿಯಮ್ಮ ದೇವಿಯ ಪಲ್ಲಕ್ಕಿಯು ಕುಮಾರೇಶ್ವರ ನಗರದ ಅನೇಕ ಬಡಾವಣೆಯಲ್ಲಿ ಸಂಚರಿಸಿ ಮರಳಿ ದೇವಸ್ಥಾನಕ್ಕೆ ಬಂದು ತಲುಪಿತು. ಪಲ್ಲಕ್ಕಿ ಉತ್ಸವದಲ್ಲಿ ಮಹಿಳಾ ಡೊಳ್ಳು ಕುಣಿತದವರು ಪಾಲ್ಗೊಂಡು ಗಮನಸೆಳೆದರು.

ಒಟ್ಟಾರೆ ಕುಮಾರೇಶ್ವರನಗರದ ಕರಿಯಮ್ಮ ದೇವಿ ದೇವಸ್ಥಾನದ ಜಾತ್ರೆ ಅದ್ಧೂರಿಯಿಂದ ನೆರವೇರಿದ್ದು, ಭಕ್ತಾಧಿಗಳಿಗೆ ದೇವಸ್ಥಾನದ ಆವರಣದಲ್ಲಿ ಅನ್ನಪ್ರಸಾದದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

Share News

About Shaikh BigTv

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *