ಕುಂದಗೋಳ: ಪತ್ರಕರ್ತ ಬಸವರಾಜ ಎಸ್ ದೀಪಾವಳಿ ಅವರಿಗೆ ಸವಾಯಿ ಗಂಧರ್ವ ಸಭಾ ಭವನದಲ್ಲಿ ಇತ್ತಿಚೆಗೆ ನಡೆದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ತಾಲೂಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಯರೇಬೂದಿಹಾಳ ಗ್ರಾಮದ ವಾಲ್ಮೀಕಿ ಸಮಾಜದ ಮತ್ತು ಕಾರ್ಯನಿರತ ಪತ್ರಕರ್ತ ಸಂಘದ ಸಹ ಕಾರ್ಯದರ್ಶಿಗಳಾದ ಬಸವರಾಜ ಎಸ್. ದೀಪಾವಳಿ ಅವರಿಗೆ ತಾಲೂಕ ದಂಡಾಧಿಕಾರಿ ರಾಜು ಮಾವರಕರ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಮೀನಾಕ್ಷಿ ಗುದಗಿ ನೇತೃತ್ವದಲ್ಲಿ ವಾಲ್ಮೀಕಿ ಸಮಾಜದ ಗಣ್ಯ ವ್ಯಕ್ತಿಗಳಿಂದ ವೇದಿಕೆ ಮೇಲೆ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

