Breaking News

ರೈಲ್ವೆಯಲ್ಲಿ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ ಸೋಮಣ್ಣ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು.
ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳೆ ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದ್ಯೋಗ ಸಿಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದು ಹೇಳಿದರು.
ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ, ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ಜಾರಿಗೆ ತಂದು ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲಾಗುತ್ತಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕಿ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *