Breaking News

ಭಾರತೀಯ ರೈಲ್ವೆಯನ್ನು ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ: ಕೇಂದ್ರ ಸಚಿವ ಸೋಮಣ್ಣ

ಹಾಸನ: ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಹಾಸನದಲ್ಲಿ ಇಂದು ಕುಟುಂಬ ಸಮೇತ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ ಡಬ್ಬಲ್ ಲೈನ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ದೇಶದ 24 ರಾಜ್ಯಗಳ 294 ಜಿಲ್ಲಾ ಕೇಂದ್ರಗಳಲ್ಲಿ 104 ವಂದೇ ಭಾರತ್ ರೈಲುಗಳು ಈಗಾಗಲೇ ಸಂಚರಿಸುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಜೊತೆಗೆ ಪ್ರತಿ ರೈಲಿಗೆ ನಾಲ್ಕರಂತೆ ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ರೈಲು ಸಂಚಾರ ಆರಂಭಿಸಲಾಗಿದೆ ಹಾಸನದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರ ತಗ್ಗಿಸಲು ಚಿಂತಿಸಲಾಗಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *