Breaking News

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ನಿಂದ ಪ್ರಚಾರ ಉಸ್ತುವಾರಿಗಳ ನೇಮಕ

ಬೆಂಗಳೂರು: ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಕ್ಷೇತ್ರಗಳಿಗೆ ಪ್ರಚಾರ ಉಸ್ತುವಾರಿಗಳನ್ನು ನೇಮಕಗೊಳಿಸಿದ್ದು, ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಿದೆ.
ಶಿಗ್ಗಾವಿ ಕ್ಷೇತ್ರಕ್ಕೆ ಸಚಿವರಾದ ಈಶ್ವರ್‌ ಖಂಡ್ರೆ, ಎಚ್‌.ಕೆ ಪಾಟೀಲ್‌, ಜಮೀರ್‌ ಅಹಮ್ಮದ್‌ ಖಾನ್‌, ಲಕ್ಷ್ಮಿ ಹೆಬ್ಬಾಳಕರ, ತಿಮ್ಮಾಪುರ, ಎಸ್‌.ಎಸ್‌ ಮಲ್ಲಿಕಾರ್ಜುನ, ಬೈರತಿ ಸುರೇಶ್‌ ಮತ್ತು ಶಿವರಾಜ್‌ ತಂಗಡಗಿ ಅವರನ್ನೊಳಗೊಂಡ ತಂಡವನ್ನು ಪಕ್ಷ ನೇಮಿಸಿದೆ.
ಸಂಡೂರು ಕ್ಷೇತ್ರಕ್ಕೆ ಸಚಿವರಾದ ಎಚ್‌. ಮುನಿಯಪ್ಪ, ಕೆ.ಜೆ ಜಾರ್ಜ್‌, ಸಂತೋಷ್‌ ಲಾಡ್‌, ನಾಗೇಂದ್ರ, ಜಮೀರ್ ಅಹಮ್ಮದ್‌ ಖಾನ್‌, ಪ್ರಿಯಾಂಕ್‌ ಖರ್ಗೆ ಸೇರಿ ಶಾಸಕರ ತಂಡವನ್ನು ರಚಿಸಲಾಗಿದೆ.
ಸಚಿವ ರಾಮಲಿಂಗ ರೆಡ್ಡಿ, ಎನ್‌. ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಸಂಸದರನ್ನೊಳಗೊಂಡ ತಂಡವನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ನೇಮಕ ಮಾಡಲಾಗಿದೆ.
ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ 26 ಸದಸ್ಯರ ತಂಡವನ್ನು ಪಕ್ಷ ರಚಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *