Breaking News

ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಆಯ್ಕೆ

ಕುಂದಗೋಳ : 2024-2029 ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳಾದ ಪರ್ವಿನ್‌’ಭಾನು ಕಾಂಟ್ರಾಕ್ಟರ್ ಮತ್ತು ವಿನಯ ನಲವಡಿ ಇಬ್ಬರು ಸಮಾನ ಮತಗಳನ್ನು ಪಡೆದು ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪರವಾಗಿ ಕುಂದಗೋಳ ತಾಲ್ಲೂಕಿನ ಎಲ್ಲ ಸರಕಾರಿ ನೌಕರರ ಪರವಾಗಿ ಗೌರವಿಸಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಾಡಲಗೇರಿ ಸೇರಿದಂತೆ ಬಿ.ಆ‌ರ್.ಸಿ.ಓ ರವರು ಕಚೇರಿಯ ಎಲ್ಲ ಸಿಬ್ಬಂದಿ ಹಾಗೂ ತಾಲ್ಲೂಕಾ ಸಂಘದ ಅಧ್ಯಕ್ಷರು ಮತ್ತು ಶಿಕ್ಷಕರು ಉಪಸ್ಥಿತರಿದ್ದು ನೂತನ ನಿರ್ದೇಶಕರಿಗೆ ಶುಭ ಹಾರೈಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *