Breaking News

ಶಕ್ತಿ ಯೋಜನೆ ಇನ್ನೂ 8.5 ವರ್ಷ ಜಾರಿಯಲ್ಲಿರುತ್ತೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಯನ್ನು ಪರಿಷ್ಕರಿಸುವ ವಿಷಯಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದು ಯಾರಿಗೆ ಟಿಕೆಟ್​ ತೆಗೆದುಕೊಳ್ಳುವ ಶಕ್ತಿ ಇದೆಯೋ ಅವರು ಡಿ.ಕೆ ಶಿವಕುಮಾರ್​ ಅವರಿಗೆ ಹೇಳಿದ್ದಾರೆ. ಅದನ್ನು ಡಿ.ಕೆ ಶಿವಕುಮಾರ್ ಪ್ರಸ್ತಾಪ ಮಾಡಿದರು ಎಂದು ಹೇಳಿದರು.
ಮುಂದುವರಿದು ಮಾತನಾಡಿದ ರಾಮಲಿಂಗರೆಡ್ಡಿ ಶಕ್ತಿ ಕಾರ್ಯಕ್ರಮ ಇನ್ನೂ 8.5 ವರ್ಷ ಇರುತ್ತದೆ‌.
ಈ ಅವಧಿಯ 3.5 ಹಾಗೂ ಮುಂದಿನ ಅವಧಿ 5 ವರ್ಷ ಜಾರಿಯಲ್ಲಿ ಇರುತ್ತದೆ ಎಂದು ಮುಂದಿನ ಬಾರಿಯು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೊತೆಗೆ ಇಲ್ಲಿಯವರೆಗೆ ಶಕ್ತಿ ಕಾರ್ಯಕ್ರಮದಲ್ಲಿ 318 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದಾರೆ. ಗೃಹ ಜ್ಯೋತಿಗೆ 1ಕೋಟಿ 20 ಲಕ್ಷ ಜನ ಆನ್‌ಲೈನ್ ನಲ್ಲಿ ಅಪ್ಲಿಕೇಷನ್ ಹಾಕಿ ಸದುಪಯೋಗ ಪಡೆದಿದ್ದಾರೆ ಮತ್ತು ಗೃಹ ಲಕ್ಷ್ಮಿಗೆ 1ಕೋಟಿ 61 ಲಕ್ಷ ಫಲಾನುಭವಿಗಳಿದ್ದಾರೆ ಎಂದು ಹೇಳಿದರು.
ಜೊತೆಗೆ ಶಕ್ತಿ ಯೋಜನೆ ಬೇಡ ಎನ್ನುವವರು ಬಹಳ ಕಡಿಮೆ, ಯಾರೋ ಬೆನ್ಸ್ ಕಾರಿನಲ್ಲಿ ಓಡಾಡುವವರು ಮಾತ್ರ ವಿರೋಧ ಮಾಡುತ್ತಾರೆ. ಬಡವರ ವಿರೋಧಿಗಳು ಮಾತ್ರ ಶಕ್ತಿ ಯೋಜನೆಯನ್ನ ವಿರೋಧ ಮಾಡುತ್ತಾರೆ.
ಹಿಂದೆ ಉಚಿತವಾಗಿ ಅಕ್ಕಿ ಕೊಟ್ಟಾಗ ಫ್ರೀ ಅಕ್ಕಿ ಕೊಟ್ಟರೆ ಸೋಂಬೇರಿ ಆಗುತ್ತಾರೆ ಅಂತ ಮಾತನಾಡಿದ್ರು.
ಈಗ ಅವರೆ ಶಕ್ತಿ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಎಲ್ಲದಕಿಂತ ವಿಶೇಷವಾಗಿ ಮಹಿಳೆಯರು ಸಂತೋಷವಾಗಿದ್ದಾರೆ. ಅಂಗವಿಕಲರಿಗೆ ಲಿಮೊಟೆಡ್ ಇನ್ನೂ ಹೆಚ್ಚು ಮಾಡಿ ಎಂದಿದ್ದಾರೆ. ಗಂಡಸರು ಕೂಡ ನಮಗೂ ಅವಕಾಶ ಮಾಡಿಕೊಡಿ ಎಂದು ಕೇಳುತ್ತಾರೆ‌ ಎಂದು ಹೇಳಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *