ಹುಬ್ಬಳ್ಳಿ : ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದ ಹತ್ತಿರ ಇರುವ ದೊಡ್ಡಹಳ್ಳಕ್ಕೆ ಸೇತುವೆ ಲೋಕಾರ್ಪಣೆಯನ್ನು ನಿನ್ನೆ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಮಾಡಿದರು. ನಂತರ ಮಾತಾನಾಡಿದ ಅವರು, ಬ್ಯಾಹಟ್ಟಿ-ಕಿರೆಸೂರ-ಇಂಗಳಹಳ್ಳಿ ರಸ್ತೆಯಲ್ಲಿ ಗ್ರಾಮದ ರೈತರೆಲ್ಲರೂ ತಮ್ಮ ಜಮೀನುಗಳಿಗೆ ಹೋಗಿ ಬರಲು ಮಳೆ ಬಂದಾಗ ಹಳ್ಳ ಕಟ್ಟಿ ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಸೇತುವೆ ನಿರ್ಮಾಣಕ್ಕಾಗಿ ಕಳೆದ 10-15 ವರ್ಷಗಳಿಂದ ಗ್ರಾಮಸ್ಥರು ಅಧಿಕಾರದಲ್ಲಿದ್ದ ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿದ್ದರು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

