ಬೆಂಗಳೂರು : ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ, 14.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.
ವಿಧಾನಸಭೆ ಉಪ ಚುನಾವಣೆ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವು ಯೋಜನೆಗಳಿಗೆ ಹಣ ಬಿಡುಗಡೆ ಆಗುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

