Breaking News

55 ಸಾವಿರ ಕೋಟಿ ರೂ. ವೆಚ್ಚದ ಮುಂಬೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಪುಣೆ: ಮುಂಬೈ -ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೆದ್ದಾರಿಯನ್ನು 55,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಚಿಂಚ್ವಾಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಮಾರ್ಗವು ಪಿಂಪ್ರಿ, ಚಿಂಚ್ವಾಡಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.
ಮೊದಲ ಹಂತದಲ್ಲಿ ನಾಸಿಕ್ ಘಾಟದಿಂದ ಖೇಡ್ ನಡುವೆ 8,000 ಕೋಟಿ ರೂಪಾಯಿ ಖರ್ಚಿನಲ್ಲಿ ಹೆದ್ದಾರಿ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.
ಮುಂಬೈ-ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚ್‌ವಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಂಕರ್ ಜಗತಾಪ್‌ ಪರವಾಗಿ ನಡೆದ ಪ್ರಚಾರ ರ್ಯಾಲಿಯಲ್ಲಿ ನಿತಿನ್ ಗಡ್ಕರಿ ಶನಿವಾರ ಘೋಷಿಸಿದರು.
ಯೋಜನೆಯ ಅಂದಾಜು ವೆಚ್ಚ 55,000 ಕೋಟಿ ರೂಪಾಯಿ. ಯೋಜನೆಯು ಮಾರ್ಗದಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಮುಂಬೈನಿಂದ ಬೆಂಗಳೂರಿಗೆ ಎಕ್ಸ್‌ಪ್ರೆಸ್‌ವೇ, ವರ್ತುಲ ರಸ್ತೆಯ ಮೂಲಕ ಹಾದುಹೋಗುವುದರಿಂದ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಿರಂತರ ಟ್ರಾಫಿಕ್ ಜಾಮ್ ಅನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *