Breaking News

ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ

ನವಲಗುಂದ: ಕುಲ ಕುಲವೆಂದು ಹೊಡೆದಾಡದಿರಿ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಸ್ಥಾಪಿತ ಮೌಡ್ಯಗಳನ್ನು ಕಳೆಯಲು ಶ್ರಮಿಸಿದವರು ಶ್ರೀ ಭಕ್ತ ಕನಕದಾಸರು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಕನಕದಾಸರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ಹಿಡಿದು ಸಾಮಾಜಿಕ ಸುಧಾರಣೆಯ ಮೂಲಕ ಕ್ರಾಂತಿಯನ್ನು ಮೊಳಗಿಸಿದವರು ಎಂದರು.

ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕಾ ಅಧ್ಯಕ್ಷ ಯೋಗಪ್ಪ ಗೊಲನಾಯ್ಕರ, ಪ್ರೇಮಾ ಹತ್ತಿಕಟಗಿ ಕನಕದಾಸರ ಕುರಿತು ಮಾತನಾಡಿದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *