ಬೆಳಗಾವಿ : 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಈ ಮೂಲಕ ಗೃಹ ಲಕ್ಷ್ಮಿ ಹಣ ಸ್ಥಗಿತದ ಆತಂಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರುವು ಬಿಡುವಂತೆ ಮಾಡಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟುವುದಿಲ್ಲ ಅಂತಹವರಿಗೆ ಗೃಹಲಕ್ಷ್ಮೀ ಹಣ ಸಂದಾಯ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





