ಕೊಟ್ಟೂರು: ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಹುತೇಕ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ಇಲಾಖೆಗೆ ವಹಿಸಿದೇ ಕರ್ನಾಟಕ ನೇರವಾಗಿ ರಾಜ್ಯ ಹ್ಯಾಬಿಟೆಡ್ ಸಂಸ್ಥೆಗೆ ವಹಿಸಿ ಮೂಲಕ ಶೇ.40 ಕಮೀಷನ್ ಪಡೆಯುವ ದಂಧೆಯಲ್ಲಿ ಕ್ಷೇತ್ರದ ಶಾಸಕರು ತೊಡಗಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಎಸ್.ಭೀಮಾನಾಯ್ಕ ಆರೋಪಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ನಾನಾ ಯೋಜನೆಯಡಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ಇಲಾಖೆಯಿಂದ ಟೆಂಡರ್ ಮೂಲಕ ಗುತ್ತಿಗೆದಾರರಿಗೆ ನೀಡದೇ ನೇರವಾಗಿ ಹ್ಯಾಬಿಟೆಡ್ ಸಂಸ್ಥೆಗೆ ನೀಡಿ ಅವರಿಂದ ಶೇ.40 ಕಮೀಷನ್ ದಂಧೆಗೆ ಶಾಸಕರು ಇಳಿದಿದ್ದಾರೆ. ಕಾಮಗಾರಿಗಳನ್ನು ಗುಣಮಟ್ಟದಲ್ಲಿ ನಿರ್ವಹಿಸದೇ ಕಳಪೆಯಲ್ಲಿ ಮಾಡುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ, ಕಾರ್ಯದರ್ಶಿ, ಜಿಲ್ಲಾಧಿಕಾರಿ ಸೇರಿದಂತೆ ವಿವಿರವಾದ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿರುವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





