ಧಾರವಾಡ: ಹತ್ತಿ ಬೀಜ ಹೊತ್ತು ಸಾಗುತ್ತಿದ್ದ ಕ್ಯಾಂಟರ್ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ವಾಹನ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಧಾರವಾಡ ಬೈಪಾಸ್ನಲ್ಲಿ ಸಂಭವಿಸಿದೆ.
ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಈ ಕ್ಯಾಂಟರ್ ವಾಹನ ಹೋಗುತ್ತಿತ್ತು. ಈ ವೇಳೆ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ವಾಹನ ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಹಾಗೂ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಅಷ್ಟರಲ್ಲಾಗಲೇ ವಾಹನ ಭಾಗಶಃ ಸುಟ್ಟಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





