ಹುಬ್ಬಳ್ಳಿ: ಕಾಂಗ್ರೆಸ್ ಅನ್ನು ನೆಚ್ಚಿಕೊಂಡು ಹೋದರೆ ಪ್ರಾದೇಶಿಕ ಪಕ್ಷಗಳು ಮುಳುಗಿ ಹೋಗಲಿವೆ ಎಂದು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ಫಲಿತಾಂಶವೇ ಇದಕ್ಕೆ ನಿದರ್ಶನ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಇದರೊಂದಿಗೆ ಹೋದ ಪ್ರಾದೇಶಿಕ ಪಕ್ಷಗಳ ಗತಿಯೂ ಹಾಗೇ ಆಗಲಿದೆ ಎಂದು ಜೋಶಿ ಭವಿಷ್ಯ ನುಡಿದರು. ದೇಶದ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ತನ್ನೊಂದಿಗೆ ತನ್ನ ಕೈ ಹಿಡಿದು ಬಂದವರನ್ನೂ ಮುಳುಗಿಸುತ್ತಿದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಅದರೊಂದಿಗೆ ಮೈತ್ರಿ ಮಾಡಿಕೊಂಡ ಸ್ಥಳೀಯ ಪಕ್ಷಗಳೂ ಕಾಂಗ್ರೆಸ್ ಜತೆ ಮುಳುಗಿ ಹೋಗಿವೆ ಎಂದು ಮಹಾರಾಷ್ಟ್ರ ಫಲಿತಾಂಶವನ್ನು ವಿಶ್ಲೇಷಿಸಿದರು. ಶರದ್ ಪವಾರ್ ನೇತೃತ್ವದ ಎನ್ ಸಿ, ಉದ್ದವ ಠಾಕ್ರೆ ನೇತೃತ್ವದ ಶಿವಸೇನಾವನ್ನು ಕಾಂಗ್ರೆಸ್ ನವರು ಮುಳುಗಿಸಿದ್ದರು. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದಿದ್ದರೆ ಜೆಎಂಎಂ ಅನ್ನೂ ಮುಳುಗಿಸುತ್ತಿದ್ದರು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





