ನವದೆಹಲಿ: ಇಂದಿನಿಂದ ಡಿಸೆಂಬರ್ 20 ರವರೆಗೆ ನಿಗದಿಯಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಸರ್ಕಾರ ಪ್ರಸ್ತಾಪಿಸಿದ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರವನ್ನು ಪ್ರತಿಪಕ್ಷಗಳು ಪ್ರತಿಭಟಿಸುವ ಸಾಧ್ಯತೆಯಿದೆ.
ಆಡಳಿತಾರೂಡ ಎನ್ ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ.
ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 26 ರಂದು ಸಂವಿಧಾನ ದಿನವಾಗಿ ಆಚರಿಸಲಾಗುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ವಿಶೇಷ ಆಚರಣೆ ನಡೆಯಲಿದೆ ಎಂದು ರಿಜಿಜು ಹೇಳಿದರು.
ಸ್ಮರಣಾರ್ಥ ಸಂದರ್ಭದ ಹೊರತಾಗಿಯೂ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮತ್ತು ವಕ್ಫ್ ಆಸ್ತಿ ಕಾಯ್ದೆಗೆ ತಿದ್ದುಪಡಿಗಳು ಸೇರಿದಂತೆ ಹಲವಾರು ವಿವಾದಾತ್ಮಕ ಶಾಸನಾತ್ಮಕ ಪ್ರಸ್ತಾಪಗಳೊಂದಿಗೆ ಸರ್ಕಾರ ಮುಂದುವರಿಯುತ್ತಿರುವುದರಿಂದ ಸಂಸತ್ತಿನಲ್ಲಿ ರಾಜಕೀಯ ವಾತಾವರಣವು ಉಲ್ಬಣಗೊಳ್ಳುವ ನಿರೀಕ್ಷೆಯಿದೆ.
ಇದರ ಜೊತೆಗೆ ಇತ್ತೀಚಿನ ಮಣಿಪುರ ಗಲಭೆ ವಿಷಯ, ಆಹಾರ ಧಾನ್ಯಗಳ ಬೆಲೆ ಏರಿಕೆ ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಮುಗಿಬೀಳು ವಿಪಕ್ಷಗಳು ಸಜ್ಜಾಗಿವೆ. ಹೀಗಾಗಿ ಮೊದಲ ದಿನದಿಂದಲೇ ಕಲಾಪಗಳು ಕಾವೇರುವ ನಿರೀಕ್ಷೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





