Breaking News

ಚಳಿಗಾಲದ ಅಧಿವೇಶನ: ಉಭಯ ಸದನಗಳ ಕಲಾಪ ಮುಂದೂಡಿಕೆ

ನವದೆಹಲಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.
ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು.
ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತರಾತರಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ ಎಂದು ಹೇಳಲಾಗಿದೆ.
ಪ್ರತಿಪಕ್ಷಗಳು ಯಾವುದೇ ಮಸೂದೆ ಮಂಡನೆ ಮಾಡುವ ಮುನ್ನ ಮಣಿಪುರದಲ್ಲಿ ಮರುಕಳಿಸಿರುವ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಗದ್ಧಲ ಸೃಷ್ಟಿಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.
ಲೋಕಸಭೆ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ವಿಪಕ್ಷಗಳು ಕಲಾಪವನ್ನು ಹಾಳು ಮಾಡಲು ಪ್ರಯತ್ನಿಸಲಿವೆ. ಜನರಿಂದ ತಿರಸ್ಕೃತಗೊಂಡವರು ಲೋಕಸಭೆಯಲ್ಲಿ ಆಡಳಿತ ಪಕ್ಷವನ್ನು ಅಧೀರರನ್ನಾಗಿ ಮಾಡಲು ಪ್ರಯತ್ನಿಸಬಾರದು ಎಂದು ಕರೆ ನೀಡಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *