ಮುಂಬೈ: ಶಿವಸೇನೆಯ (ಶಿಂದೆ ಬಣ) ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ಏಕನಾಥ ಶಿಂದೆ ಆಯ್ಕೆಯಾದರು.
ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದ ಪಕ್ಷದ ಎಲ್ಲ 57 ಸದಸ್ಯರು ಇದ್ದರು.
ಮುಖ್ಯ ಸಚೇತಕ, ಇತರ ಪದಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ಶಿಂದೆ ಅವರಿಗೆ ನೀಡಲಾಗಿದೆ ಎಂದು ಪಕ್ಷದ ನಾಯಕ ದೀಪಕ್ ಕೇಸಕರ್ ಹೇಳಿದ್ದಾರೆ.
ಹೊಸ ಸಿ.ಎಂ ಆಯ್ಕೆ ಕುರಿತಂತೆ ಮೈತ್ರಿ ಪಕ್ಷಗಳಲ್ಲಿ ಯಾವುದೇ ವಿವಾದ ಇಲ್ಲ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





