Breaking News

5 ಸಾವಿರ ಟ್ರ್ಯಾಕ್ಟರ್ ಗಳ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ: ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಕೊಪ್ಪಳ : ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತರೆ ಸಮುದಾಯಗಳಿಗೆ ಮಾತ್ರ ಸ್ಪಂದನೆ ನೀಡುತ್ತಿದ್ದಾರೆ, ಆದರೆ ನಮ್ಮ ಸಮುದಾಯದ ವಿಚಾರ ಅಂತ ಬಂದಾಗ ಅವರ ಕಡೆಯಿಂದ ಸೂಕ್ತವಾದ ಸ್ಪಂದನೆ ಇರಲ್ಲ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ನಮ್ಮ ಸುದೀರ್ಘವಾದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಯಾವುದೇ ಕನಿಷ್ಠ ಸ್ಪಂದನೆ ನೀಡಿಲ್ಲ. ಆದ್ರೆ ನಮ್ಮ ಸಿಎಂ ಬೇರೆ ಸಮುದಾಯಗಳಿಗೆ ಮಾತ್ರ ತಕ್ಷಣ ಸ್ಪಂದನೆ ನೀಡಿದ್ದಾರೆ. ಇದರಿಂದ ಸಮುದಾಯಕ್ಕೆ ಬೇಸರವಾಗಿದ್ದು, ಬೆಳಗಾವಿ ಅಧಿವೇಶನದ ವೇಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.
ಚಳಿಗಾಲದ ವಿಧಾನಸಭೆ ಅಧಿವೇಶನದ ವೇಳೆ ಸುಮಾರು 5 ಸಾವಿರ ಟ್ರ‍್ಯಾಕ್ಟರ್‌ಗಳ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *