Breaking News

5 ಸಾವಿರ ಟ್ರ್ಯಾಕ್ಟರ್ ಗಳ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ: ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಕೊಪ್ಪಳ : ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತರೆ ಸಮುದಾಯಗಳಿಗೆ ಮಾತ್ರ ಸ್ಪಂದನೆ ನೀಡುತ್ತಿದ್ದಾರೆ, ಆದರೆ ನಮ್ಮ ಸಮುದಾಯದ ವಿಚಾರ ಅಂತ ಬಂದಾಗ ಅವರ ಕಡೆಯಿಂದ ಸೂಕ್ತವಾದ ಸ್ಪಂದನೆ ಇರಲ್ಲ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ನಮ್ಮ ಸುದೀರ್ಘವಾದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಯಾವುದೇ ಕನಿಷ್ಠ ಸ್ಪಂದನೆ ನೀಡಿಲ್ಲ. ಆದ್ರೆ ನಮ್ಮ ಸಿಎಂ ಬೇರೆ ಸಮುದಾಯಗಳಿಗೆ ಮಾತ್ರ ತಕ್ಷಣ ಸ್ಪಂದನೆ ನೀಡಿದ್ದಾರೆ. ಇದರಿಂದ ಸಮುದಾಯಕ್ಕೆ ಬೇಸರವಾಗಿದ್ದು, ಬೆಳಗಾವಿ ಅಧಿವೇಶನದ ವೇಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.
ಚಳಿಗಾಲದ ವಿಧಾನಸಭೆ ಅಧಿವೇಶನದ ವೇಳೆ ಸುಮಾರು 5 ಸಾವಿರ ಟ್ರ‍್ಯಾಕ್ಟರ್‌ಗಳ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *