ನವಲಗುಂದ: ತಾಲೂಕಿನ ಖನ್ನೂರ ಗ್ರಾಮದ ಆರ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನವಲಗುಂದದ ಜಗದ್ಗುರು ಅಜಾತ ನಾಗಲಿಂಗ ಮಹಾಸ್ವಾಮಿ ವಿದ್ಯಾಪೀಠ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಈರಮ್ಮ ಬೆಂಡಿಗೇರಿ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ. ಮಹಮ್ಮದ್ ಶೋಯೆಬ್ ಹೊರಗಿನಮನಿ ಅರೇಬಿಕ್ ಧಾರ್ಮಿಕ ಪಠಣ ಪ್ರಥಮ ಸ್ಥಾನ ಹಾಗೂ ಪೂರ್ವಿಕಾ ದಲಬಂಜನ ಹಿಂದಿ ಭಾಷಣದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಈ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ ಅಭಿನಂದಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





